July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಡಿ.ಎಸ್.ಎ , ಡಿ. ಎಫ್. ಎ ಮುಂತಾದ ವಿಷಯಗಳಲ್ಲಿ ಕಂಪ್ಯೂಟರ್ ಶಿಕ್ಷಣದ ತರಗತಿಗಳನ್ನು ಸೆ. 1ರಂದು ಉದ್ಘಾಟನೆ ಮಾಡಲಾಯಿತು.

ಉಜಿರೆ ಐಕಾನ್ ನ್ಯಾಷನಲ್ ಬೋರ್ಡ್ ಆಫ್ ಕಂಪ್ಯೂಟರ್ ಎಜುಕೇಶನ್ ಇದರ ಮಾಲಕ ಸಂತೋಷ್ ಕಂಪ್ಯೂಟರ್ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ‘ ಮುಂದುವರಿಯುತ್ತಿರುವ ದೇಶದಲ್ಲಿ ನಮ್ಮನ್ನು ನಾವು ವೇಗವಾಗಿ ತೊಡಗಿಸಿಕೊಳ್ಳಬೇಕಾದ ಅಗತ್ಯತೆ ಇದೆ. ನಮ್ಮಲ್ಲಿ ಕೌಶಲ್ಯತೆ ಹೆಚ್ಚಾದ ಹಾಗೆ ಅವಕಾಶಗಳು ಹೆಚ್ಚಾಗುತ್ತಾ ಹೋಗುತ್ತದೆ. ಇಂದು ಕಂಪ್ಯೂಟರ್ ಜ್ಞಾನ ಇಲ್ಲದ ವಿದ್ಯಾರ್ಥಿಗಳ ಬದುಕು ಪೂರ್ಣ ಶಿಕ್ಷಣ ಎನಿಸದು. ಹಾಗಾಗಿ ಕಾಲೇಜಿನಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭವಾಗಿರುವುದು ಶಿಕ್ಷಣದ ಅವಧಿಯಲ್ಲಿಯೇ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕೋರ್ಸು ಮುಗಿಸಿಕೊಳ್ಳಲು ದೊರೆತ ಸುವರ್ಣ ಅವಕಾಶವಾಗಿದೆ ಉಪಯುಕ್ತವಾಗಿದೆ’ ಎಂದರು.

ಕಾಲೇಜಿನ ಅಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಮಾತನಾಡಿ, ‘ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಅನೇಕ ಹೊಸ ವಿಚಾರಗಳನ್ನು ಕಾಲೇಜಿನೊಳಗೆ ಆರಂಭಿಸಿಕೊಂಡಿದ್ದೇವೆ. ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಬಾರದು. ಹಾಗಾಗಿ ಕಾಲೇಜಿನೊಳಗಿನ ಅವಕಾಶಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವ ಮನಸ್ಸು ಮಾಡಬೇಕು’ ಎಂದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಚಂದನಾ ಇದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಶುಭಲಕ್ಷ್ಮಿ ವಂದಿಸಿದರು.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!