25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಡಿ.ಎಸ್.ಎ , ಡಿ. ಎಫ್. ಎ ಮುಂತಾದ ವಿಷಯಗಳಲ್ಲಿ ಕಂಪ್ಯೂಟರ್ ಶಿಕ್ಷಣದ ತರಗತಿಗಳನ್ನು ಸೆ. 1ರಂದು ಉದ್ಘಾಟನೆ ಮಾಡಲಾಯಿತು.

ಉಜಿರೆ ಐಕಾನ್ ನ್ಯಾಷನಲ್ ಬೋರ್ಡ್ ಆಫ್ ಕಂಪ್ಯೂಟರ್ ಎಜುಕೇಶನ್ ಇದರ ಮಾಲಕ ಸಂತೋಷ್ ಕಂಪ್ಯೂಟರ್ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ‘ ಮುಂದುವರಿಯುತ್ತಿರುವ ದೇಶದಲ್ಲಿ ನಮ್ಮನ್ನು ನಾವು ವೇಗವಾಗಿ ತೊಡಗಿಸಿಕೊಳ್ಳಬೇಕಾದ ಅಗತ್ಯತೆ ಇದೆ. ನಮ್ಮಲ್ಲಿ ಕೌಶಲ್ಯತೆ ಹೆಚ್ಚಾದ ಹಾಗೆ ಅವಕಾಶಗಳು ಹೆಚ್ಚಾಗುತ್ತಾ ಹೋಗುತ್ತದೆ. ಇಂದು ಕಂಪ್ಯೂಟರ್ ಜ್ಞಾನ ಇಲ್ಲದ ವಿದ್ಯಾರ್ಥಿಗಳ ಬದುಕು ಪೂರ್ಣ ಶಿಕ್ಷಣ ಎನಿಸದು. ಹಾಗಾಗಿ ಕಾಲೇಜಿನಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭವಾಗಿರುವುದು ಶಿಕ್ಷಣದ ಅವಧಿಯಲ್ಲಿಯೇ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕೋರ್ಸು ಮುಗಿಸಿಕೊಳ್ಳಲು ದೊರೆತ ಸುವರ್ಣ ಅವಕಾಶವಾಗಿದೆ ಉಪಯುಕ್ತವಾಗಿದೆ’ ಎಂದರು.

ಕಾಲೇಜಿನ ಅಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಮಾತನಾಡಿ, ‘ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಅನೇಕ ಹೊಸ ವಿಚಾರಗಳನ್ನು ಕಾಲೇಜಿನೊಳಗೆ ಆರಂಭಿಸಿಕೊಂಡಿದ್ದೇವೆ. ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಬಾರದು. ಹಾಗಾಗಿ ಕಾಲೇಜಿನೊಳಗಿನ ಅವಕಾಶಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವ ಮನಸ್ಸು ಮಾಡಬೇಕು’ ಎಂದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಚಂದನಾ ಇದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಶುಭಲಕ್ಷ್ಮಿ ವಂದಿಸಿದರು.

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya
error: Content is protected !!