ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಸಭೆಗೆ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಕುಮಾರ್ ನಾಥ್ ಕಲಮಂಜ ಹಾಗೂ ತಾಲೂಕು ಅಧ್ಯಕ್ಷ ಉದಯ ಬಂದಾರು ನೇತೃತ್ವ ವಹಿಸಿದ್ದರು.


ಸಭೆಯ ಆರಂಭ ಶ್ರಮಿಕ ಗೀತೆಯಿಂದಾಗಿ, ಸ್ವಾಗತ ಭಾಷಣವನ್ನು ತಾಲೂಕು ಅಧ್ಯಕ್ಷರು ಸಲ್ಲಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಮನಿಹಳ್ಳ ಸಮನ್ವಯ ಸಭೆಯ ಮಹತ್ವವನ್ನು ವಿವರಿಸಿದರು. ಬಳಿಕ ಮೂರು ಯೂನಿಯನ್‌ಗಳ ವರದಿ ಮಂಡನೆಯಾದ ನಂತರ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲಕೃಷ್ಣ ಸಂಘಟನೆಯ ರಾಜ್ಯ-ಜಿಲ್ಲಾ ಮಟ್ಟದ ಚಟುವಟಿಕೆಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘಟನೆಯ ಉದ್ದೇಶ, ರಚನೆ ಹಾಗೂ ಮುಂದಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಸೆ. 14ರಂದು ಶಿವಮೊಗ್ಗದಲ್ಲಿ ನಡೆಯಲಿರುವ 70ನೇ ವರ್ಷದ ರಾಜ್ಯಮಟ್ಟದ ಕುಟುಂಬ ಸಮೇತ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ವಿಶ್ವಕರ್ಮ ದಿನಾಚರಣೆ, ನವೆಂಬರ್ 12ರಂದು ಬೆಂಗಳೂರು ರಾಜ್ಯಮಟ್ಟದ ಹೋರಾಟ ಸೇರಿದಂತೆ ಹಲವು ನಿರ್ಣಾಯಕ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya
error: Content is protected !!