23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಾನರ್ಪ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ತಾಲೂಕಿನ ಯೋಚನಾಧಿಕಾರಿ ಯಶೋಧರ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಮಹಿಳೆಯರಲ್ಲಾದ ಪರಿವರ್ತನೆ ಬಗ್ಗೆ ತಿಳಿಸುತ್ತಾ ಕೇಂದ್ರದಲ್ಲಿ ಉತ್ತಮ ಮಾಹಿತಿಗಳನ್ನೂ ನೀಡಲಾಗುತ್ತಿದ್ದು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ತಾಲೂಕಿನಲ್ಲಿ 25 ಚಾಲ್ತಿ ಕೇಂದ್ರಗಳಿಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದು ಪ್ರಭುದ್ಧತೆಯನ್ನು ಹೊಂದಿದ ಸದಸ್ಯರಿಗೆ ಪ್ರಬುದ್ಧತೆ ನೀಡಿ ಹೊಸ ಸಂಘಗಳಿಗೆ ಹೊಸ ಕೇಂದ್ರ ಮಾಡುವರೇ ಅವಕಾಶವನ್ನು ಕಲ್ಪಿಸಲಾಗುತ್ತಿದೆ ಎಂದರು .

ಯಂಗ್ ಚಾಲೆಂಜರ್ಸ್ ಕ್ಲಬ್ ಸಂಚಾಲಕರು ಹಾಗೂ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ನಾಮದೇವ್ ರವರು ಅವಕಾಶಗಳನ್ನು ಬಳಸಿಕೊಂಡಾಗ ಸಾಧನೆ ಸಾಧ್ಯ ಈ ದಿನ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಹಮ್ಮಿಕೊಂಡಿದ್ದು ಕ್ಷೇತ್ರದ ಯಾವುದೇ ಕಾರ್ಯಕ್ರಮಕ್ಕೂ ನಾವು ಜೊತೆಯಾಗಿರುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ, ಶ್ರೀಧರ ಜೈನ್, ಒಕ್ಕೂಟ ಅಧ್ಯಕ್ಷ ಸತೀಶ್ ನಾಯ್ಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾನರ್ಪ ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಕಡಿರುದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರತ್ನಾವತಿಯವರು ವಹಿಸಿದ್ದರು. ಮೇಲ್ವಿಚಾರಕರಾದ ಜನಾರ್ದನ್, ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಾದ ಪುಷ್ಪವತಿ ಸ್ವಾಗತಿಸಿ, ರಾಧಾ ವಂದಿಸಿದರು. ಜ್ಞಾನವಿಕಾಸ ಸಂಯೋಜಕ ಶರ್ಮಿಳ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು.

Related posts

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya
error: Content is protected !!