32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ರವರ ಅಧ್ಯಕ್ಷತೆಯಲ್ಲಿ ಸೆ.1ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಗಣೇಶ್ ಆರ್., ಹರಿಕೃಷ್ಣ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ರಜನಿ ಎಂ.ಆರ್., ಸವಿತಾ ಶೆಟ್ಟಿ, ಚಿದಾನಂದ ಶೆಟ್ಟಿ, ಆಶಾಲತಾ, ಮೆರಿಯಮ್ಮ, ಮೋಹನದಾಸ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿಪಿ ಸ್ವಾಗತಿಸಿದರು. ಸಿಬ್ಬಂದಿ ಮೋಹನ್ ಅನುಪಾಲನ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಸುಪ್ರಿತಾ ಜಮಾ ಖರ್ಚು ವಿವರ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya
error: Content is protected !!