July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

ಬೆಳ್ತಂಗಡಿ: ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಪ್ರವೀಣ್ ರೈ ಪಿ. ಅಧ್ಯಕ್ಷತೆಯಲ್ಲಿ ಸೆ.2 ರಂದು ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಪ್ರವೀಣ್ ರೈ ಮಾತನಾಡಿ ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ 2020-25ನೇ ಸಾಲಿನ ಆಡಳಿತ ಮಂಡಳಿ ಅವಧಿಯ ಕೊನೆಯ ಮಹಾಸಭೆ ಇದಾಗಿದೆ. ಪ್ರಥಮ ಎರಡುವರೆ ವರ್ಷದ ಅವಧಿಯಲ್ಲಿ ಪ್ರಸನ್ನ ಗೌಡ ರವರು ಅಧ್ಯಕ್ಷರಾಗಿ, ದ್ವಿತೀಯ ಎರಡುವರೆ ವರ್ಷದ ನನ್ನ ಅಧ್ಯಕ್ಷೀಯ ಅವಧಿಯ ಒಟ್ಟು ಐದು ವರ್ಷದಲ್ಲಿ ಪುತ್ತಿಲ ಮತ್ತು ಬಾರ್ಯ ಗ್ರಾಮ ವ್ಯಾಪ್ತಿಯ ಎಲ್ಲಾ ಕೃಷಿಕರಿಗೆ ಮತ್ತು ಇತರ ಸದಸ್ಯ ಬಂಧುಗಳಿಗೆ ಯಾವುದೇ ತಾರತಮ್ಯ ಮಾಡದೆ ಉತ್ತಮ ಸೇವೆಯನ್ನು ನೀಡಿದ್ದೇವೆ. ಸಂಘದಲ್ಲಿ 2906 ಸದಸ್ಯರಿದ್ದು ಒಟ್ಟು ರೂ.25,71,65,421 ಠೇವಣಾತಿಯನ್ನು ಹೊಂದಿದೆ ಮತ್ತು ರೂ.5,02,77,000 ಪಾಲು ಬಂಡವಾಳವನ್ನು ಹೊಂದಿದೆ. ಮತ್ತು ರೂ.68,00,35,758 ದುಡಿಯುವ ಬಂಡವಾಳವನ್ನು ಹೊಂದಿದೆ. ನಮ್ಮ ಸಂಘವು ರೂ.54,84,87,942 ಸಾಲವನ್ನು ರೈತರಿಗೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ರೂ.2,81,71,66,790 ವ್ಯವಹಾರ ನಡೆಸಿ, ವಾರ್ಷಿಕವಾಗಿ 1,02,75,120.88 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.12 ರಷ್ಟು ಡಿವಿಡೆಂಡ್ ನೀಡುವುದಾಗಿ ಹೇಳಿದರು.

2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಯಿತು.

ಉಪಾಧ್ಯಕ್ಷ ಶಿವರಾಮ ಕೆಳಗಿನಂಗಡಿ, ನಿರ್ದೇಶಕರಾದ ಪ್ರಸನ್ನ ಯನ್, ರಾಜೇಶ್ ರೈ ಹೆನ್ನಡ್ಕ, ಪಾರ್ಶ್ವನಾಥ ಜೈನ್ ಕಲ್ಲಾಜೆ, ಶೇಸಪ್ಪ ಸಾಲಿಯಾನ್, ಅಶ್ರಫ್ ಪೊಸೆಕ್ಕೆಲ, ಲಿಡಿಯಾ ಜೆರೋಮ್ ಬ್ರಾಗ್ಸ್ , ಸವಿತಾ ವೆಂಕಟೇಶ್ ಪೂಜಾರಿ, ಪ್ರಸಾದ್ ಮೂರುಗೋಳಿ, ಮೋಹನ್ ಗೌಡ, ಸುರೇಶ್, ದ.ಕ.ಜಿ.ಕೇ.ಸ.ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ವೃತ್ತಿಪರ ನಿರ್ದೇಶಕರಾದ ಚಂದ್ರಶೇಖರ್, ಅರುಣ್ ಬಂಗೇರ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಟಿ‌. ವರದಿ ವಾಚಿಸಿದರು. ನಿರ್ದೇಶಕ ಶೇಸಪ್ಪ ಸಾಲಿಯಾನ್ ಸ್ವಾಗತಿಸಿದರು.

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya
error: Content is protected !!