July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಉಪನ್ಯಾಸಮಾಲೆ-5 ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಯದುಪತಿ ಗೌಡ ಇವರು ಸಭಾಧ್ಯಕ್ಷತೆಯನ್ನು ವಹಿಸಿ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮಾಧವ ಎಂ. ಕೆ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ ” ವಿನಾಯಕ ಕೃಷ್ಣ ಗೋಕಾಕ್ ರವರು ಕನ್ನಡದ ವಿಸ್ಮಯ ಕವಿ, ಗೋಕಾಕ್ ಚಳುವಳಿಯ ಹರಿಕಾರ, ವಿನಾಯಕ ಕಾವ್ಯ ನಾಮಾಂಕಿತರಾಗಿದ್ದು ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವವನ್ನು ಪಡಕೊಂಡರು. ಅವರ ಅಮೂಲ್ಯ ಬರಹಗಳು ಅವರಿಗೆ ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ತಂದುಕೊಟ್ಟಿತು. ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದು ಕನ್ನಡ ಸಾರಸ್ವತ ಲೋಕಕ್ಕೆ ಅವರು ನೀಡಿದ ಕೊಡುಗೆ ಸ್ತುತ್ಯರ್ಹವಾಗಿದೆ.” ಎಂದರು.

ಅರ್ಥಶಾಸ್ತ್ರ ಉಪನ್ಯಾಸಕರಾದ ವಸಂತಿ ಪಿ. ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಇವರು ವಂದಿಸಿದರು.ಈ ಸಂದರ್ಭದಲ್ಲಿ ” ಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು”ಎಂಬ ವಿ ಕೃ ಗೋಕಾಕರ ಪ್ರಸಿದ್ಧ ಹಾಡನ್ನು ಪ್ರಸ್ತುತಪಡಿಸಲಾಯಿತು.

Related posts

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya
error: Content is protected !!