ಕಾಶಿಪಟ್ಣ: ರೂ. 20 ಲಕ್ಷದ ಅನುದಾನದಲ್ಲಿ ನಿರ್ಮಾಣಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿಯ ಉದ್ಘಾಟನೆಯು ಸೆ.2 ರಂದು ನೆರವೇರಿತು.

ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರಿಂದ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮೋಹನ್ ಶೆಟ್ಟಿ ಕಾಶಿಪಟ್ಣ, ಬೆಳ್ತಂಗಡಿ ಯುವ ಮೋರ್ಚಾ ಕಾರ್ಯದರ್ಶಿಯದ ವಿನೀತ್ ಜೆ ಕೋಟ್ಯಾನ್, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ, ಬೆಟರ್ಮೆಂಟ್ ಕಮಿಟಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ಪಡ್ಯೋಡಿ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹರೀಶ್ ಕೆ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಜೈನ್ , ರವೀಂದ್ರ, ಶಿಲ್ಪಾ,ಸುಶೀಲ , ಶುಭವಿ , ಸವಿತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.











