22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್, ಕುಕ್ಕೇಡಿ-ನಿಟ್ಟಡೆ ಗ್ರಾಮಗಳ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಕುಕ್ಕೇಡಿ-ನಿಟ್ಟಡೆ ಗ್ರಾಮದಲ್ಲಿ ಗ್ರಾಮೀಣ ಅಂಚೆಪಾಲಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುವ ಗ್ರಾಮೀಣ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಮತ್ತು ವಿಜಯರಾಜ್ ಜೈನ್ ಇವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಹಾಗೂ ಕುಕ್ಕೇಡಿ ಪಂಚಾಯತಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ದಿ। ಸಂಜೀವ ಗೌಡರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ಆ. 31ರಂದು ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ದಾರ ಶಿವಪ್ರಸಾದ್ ಅಜಿಲರು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ. ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ಅಂಚೆ ಇಲಾಖೆ ಯ ಪುತ್ತೂರು ವಿಭಾಗದ ಹಿರಿಯ ಅಧೀಕ್ಷಕ ನರಸಿಂಹ ಕಾಮತ್ ಭಾಗವಹಿಸಿದ್ದರು. ನಿವೃತ್ತ ಅಂಚೆ ಪಾಲಕರರು ದಂಪತಿ ಸಹಿತ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯರು, ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್., ಜಿ.ಪಂ. ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಆನಂದ ಎನ್. ಕೋಟಿ ಚೆನ್ನಯ್ಯ ಸೇವಾ ಸಮಿತಿ, ಅಧ್ಯಕ್ಷ ಸತೀಶ್ ಕೇರಿಯಾರು, ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಪಂಚಾಯತ್‌ ಸಿಬ್ಬಂದಿ, ಊರ ನಾಗರೀಕ ರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ. ಸ್ವಾಗತಿಸಿ, ಜಗನ್ನಾಥ ದೇವಾಡಿಗ ನಿರೂಪಿಸಿದರು. ಕಾರ್ಯದರ್ಶಿ ಕುಂಜ ವಂದಿಸಿದರು.

Related posts

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!