38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

ಧರ್ಮಸ್ಥಳ :ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ ನಡೆಯಿತು.

ಶಿವಮೊಗ್ಗದಿಂದ ಆರಂಭವಾದ ಜಾಥ ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು. ಜಾಥದಲ್ಲಿ 200ಕ್ಕೂ ಹೆಚ್ಚು ವಾಹನದಲ್ಲಿ 1500ಕ್ಕೂ ಹೆಚ್ಚು ಧರ್ಮ ಭಕ್ತರು ಆಗಮಿಸಿದರು.

ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಇನ್ನು ಜಾಥದ ಜೊತೆಗೆ ತುಂಗಾ-ಗಂಗಾ-ನೇತ್ರಾವತಿಯ ಪವಿತ್ರ ನದಿಯಿಂದ ನೀರನ್ನು ತರಲಾಗಿದ್ದು, ಧರ್ಮಸ್ಥಳದಲ್ಲಿ ಮೂರು ನದಿಯ ನೀರು ಪ್ರೋಕ್ಷಣೆ ಮಾಡಲಾಗಿದೆ. ಜಾಥ ತಲುಪಿದ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ , ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ.

ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ. ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ. ಅಂದೇ ಇವರೆನ್ನೆಲ್ಲಾ ಅರೆಸ್ಟ್ ಮಾಡಿ ಒದ್ದು ಒಳಗೆ ಹಾಕಿದಿದ್ರೆ ಈ ಮಟ್ಟಿಗೆ ಈ ವಿಚಾರ ಬೆಳೆಯುತ್ತಿರಲಿಲ್ಲ. ಈಗ ಅವರ ಬಾಯಲ್ಲೇ ಎಲ್ಲಾ ಸತ್ಯ ಹೊರಬರುತ್ತಿದೆ.ಸರ್ಕಾರ ಇವರನ್ನ ಇಲ್ಲಿವರೆಗೆ ಬಿಟ್ಟದ್ದೇ ತಪ್ಪು.ವಿದೇಶಿ ಹಣ ಬಂದಿದೆ, ರಾಷ್ಟ್ರದ್ರೋಹಿಗಳು ಇದರಲ್ಲಿ ಕೈ ಜೋಡಿಸಿದ್ದಾರೆ. ಎಸ್.ಐ.ಟಿ.ಯಿಂದ ಸಾಕಷ್ಟು ಮಾಹಿತಿ ಹೊರಬಂದಿದೆ, ಅವರಿಗೆ ಧನ್ಯವಾದ ಎಂದರು. 18 ಅಡಿ ಗುಂಡಿ ತೆಗೆದು ಹೆಣ ಹೂಳಲು ಸಾಧ್ಯವೇ.ಪ್ರಕರಣವನ್ನ ಎನ್.ಐ.ಎ‌.ಗೆ ಕೊಡಬೇಕು. ಹಿಂದೂ ಧರ್ಮ ಉಳಿಯಬೇಕು, ಹಿಂದೂ ಧರ್ಮ ಉಳಿಯಲು ಪ್ರಾಣ ಕೊಡಲು ನಾವು ಸಿದ್ಧ ಎಂದರು. ಈ ಪ್ರಕರಣದ ಹಿಂದೆ ಇರುವ ಸಮೀರನಿಗೆ ಎಸ್ ಡಿ ಪಿಐ ಬೆಂಬಲ ಇದೆ. ವಕೀಲರುಗಳಿಗೆ ಹಣ ಎಲ್ಲಿಂದ ಸಿಗುತ್ತಿದೆ. ವಿದೇಶದ ಕಾಣದ ಕೈಗಳು ಕೆಲಸ ಮಾಡುತ್ತಿದೆ ಎಂದರು.

Related posts

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!