September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya
error: Content is protected !!