September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಾರಾವಿ: ಮಕ್ಕಳ ಸುರಕ್ಷತೆ, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಭಾರತ ಸರಕಾರವು 2012ರಲ್ಲಿ ಜಾರಿಗೊಳಿಸಿದ್ದ ಮಹತ್ವದ ಕಾನೂನು ’ಪೋಕ್ಸೋ ಕಾಯ್ದೆ’ ಹಾಗೂ ಆರೋಗ್ಯಕರ ಮತ್ತು ಸಕಾರಾತ್ಮಕ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಉದ್ದೇಶಕ್ಕಾಗಿ ’ವ್ಯಸನ ಮುಕ್ತ ಕಾಲೇಜು’ ಎಂಬ ವಿಷಯಗಳ ಬಗ್ಗೆ ಸಂತ ಅಂತೋನಿ ಕಾಲೇಜು ನಾರಾವಿ ಇಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನೆ ಪ್ರತಿಜ್ಞೆಯನ್ನು ಬೋಧಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ತಮ್ಮ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಎ. ಅವರು ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಮಾಹಿತಿಯನ್ನು ನೀಡಿದರು. ’ವ್ಯಸನ ಮುಕ್ತ ಕಾಲೇಜು’ ಎಂಬ ವಿಚಾರದ ಬಗ್ಗೆ ಮಾತನಾಡಿದ ಬೆಂಗಳೂರಿನ ವಕೀಲರಾದ ಶ್ರೀಮತಿ ರಶ್ಮಿತಾ ಎನ್ ಇವರು ’ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಲು ವಿದ್ಯಾರ್ಥಿಗಳು ಪಣತೊಡಬೇಕು ಎಂದರು.

ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಚೇತ ಸ್ವಾಗತಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ತಮೀಮಾ ಧನ್ಯವಾದವಿತ್ತರು. ವಿದ್ಯಾರ್ಥಿನಿ ರಿಸಾನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya
error: Content is protected !!