23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

ಬೆಳ್ತಂಗಡಿ: ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಪ್ರವೀಣ್ ರೈ ಪಿ. ಅಧ್ಯಕ್ಷತೆಯಲ್ಲಿ ಸೆ.2 ರಂದು ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಪ್ರವೀಣ್ ರೈ ಮಾತನಾಡಿ ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ 2020-25ನೇ ಸಾಲಿನ ಆಡಳಿತ ಮಂಡಳಿ ಅವಧಿಯ ಕೊನೆಯ ಮಹಾಸಭೆ ಇದಾಗಿದೆ. ಪ್ರಥಮ ಎರಡುವರೆ ವರ್ಷದ ಅವಧಿಯಲ್ಲಿ ಪ್ರಸನ್ನ ಗೌಡ ರವರು ಅಧ್ಯಕ್ಷರಾಗಿ, ದ್ವಿತೀಯ ಎರಡುವರೆ ವರ್ಷದ ನನ್ನ ಅಧ್ಯಕ್ಷೀಯ ಅವಧಿಯ ಒಟ್ಟು ಐದು ವರ್ಷದಲ್ಲಿ ಪುತ್ತಿಲ ಮತ್ತು ಬಾರ್ಯ ಗ್ರಾಮ ವ್ಯಾಪ್ತಿಯ ಎಲ್ಲಾ ಕೃಷಿಕರಿಗೆ ಮತ್ತು ಇತರ ಸದಸ್ಯ ಬಂಧುಗಳಿಗೆ ಯಾವುದೇ ತಾರತಮ್ಯ ಮಾಡದೆ ಉತ್ತಮ ಸೇವೆಯನ್ನು ನೀಡಿದ್ದೇವೆ. ಸಂಘದಲ್ಲಿ 2906 ಸದಸ್ಯರಿದ್ದು ಒಟ್ಟು ರೂ.25,71,65,421 ಠೇವಣಾತಿಯನ್ನು ಹೊಂದಿದೆ ಮತ್ತು ರೂ.5,02,77,000 ಪಾಲು ಬಂಡವಾಳವನ್ನು ಹೊಂದಿದೆ. ಮತ್ತು ರೂ.68,00,35,758 ದುಡಿಯುವ ಬಂಡವಾಳವನ್ನು ಹೊಂದಿದೆ. ನಮ್ಮ ಸಂಘವು ರೂ.54,84,87,942 ಸಾಲವನ್ನು ರೈತರಿಗೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ರೂ.2,81,71,66,790 ವ್ಯವಹಾರ ನಡೆಸಿ, ವಾರ್ಷಿಕವಾಗಿ 1,02,75,120.88 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.12 ರಷ್ಟು ಡಿವಿಡೆಂಡ್ ನೀಡುವುದಾಗಿ ಹೇಳಿದರು.

2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಯಿತು.

ಉಪಾಧ್ಯಕ್ಷ ಶಿವರಾಮ ಕೆಳಗಿನಂಗಡಿ, ನಿರ್ದೇಶಕರಾದ ಪ್ರಸನ್ನ ಯನ್, ರಾಜೇಶ್ ರೈ ಹೆನ್ನಡ್ಕ, ಪಾರ್ಶ್ವನಾಥ ಜೈನ್ ಕಲ್ಲಾಜೆ, ಶೇಸಪ್ಪ ಸಾಲಿಯಾನ್, ಅಶ್ರಫ್ ಪೊಸೆಕ್ಕೆಲ, ಲಿಡಿಯಾ ಜೆರೋಮ್ ಬ್ರಾಗ್ಸ್ , ಸವಿತಾ ವೆಂಕಟೇಶ್ ಪೂಜಾರಿ, ಪ್ರಸಾದ್ ಮೂರುಗೋಳಿ, ಮೋಹನ್ ಗೌಡ, ಸುರೇಶ್, ದ.ಕ.ಜಿ.ಕೇ.ಸ.ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ವೃತ್ತಿಪರ ನಿರ್ದೇಶಕರಾದ ಚಂದ್ರಶೇಖರ್, ಅರುಣ್ ಬಂಗೇರ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಟಿ‌. ವರದಿ ವಾಚಿಸಿದರು. ನಿರ್ದೇಶಕ ಶೇಸಪ್ಪ ಸಾಲಿಯಾನ್ ಸ್ವಾಗತಿಸಿದರು.

Related posts

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya
error: Content is protected !!