September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

ಬೆಳ್ತಂಗಡಿ: ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಪ್ರವೀಣ್ ರೈ ಪಿ. ಅಧ್ಯಕ್ಷತೆಯಲ್ಲಿ ಸೆ.2 ರಂದು ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಪ್ರವೀಣ್ ರೈ ಮಾತನಾಡಿ ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ 2020-25ನೇ ಸಾಲಿನ ಆಡಳಿತ ಮಂಡಳಿ ಅವಧಿಯ ಕೊನೆಯ ಮಹಾಸಭೆ ಇದಾಗಿದೆ. ಪ್ರಥಮ ಎರಡುವರೆ ವರ್ಷದ ಅವಧಿಯಲ್ಲಿ ಪ್ರಸನ್ನ ಗೌಡ ರವರು ಅಧ್ಯಕ್ಷರಾಗಿ, ದ್ವಿತೀಯ ಎರಡುವರೆ ವರ್ಷದ ನನ್ನ ಅಧ್ಯಕ್ಷೀಯ ಅವಧಿಯ ಒಟ್ಟು ಐದು ವರ್ಷದಲ್ಲಿ ಪುತ್ತಿಲ ಮತ್ತು ಬಾರ್ಯ ಗ್ರಾಮ ವ್ಯಾಪ್ತಿಯ ಎಲ್ಲಾ ಕೃಷಿಕರಿಗೆ ಮತ್ತು ಇತರ ಸದಸ್ಯ ಬಂಧುಗಳಿಗೆ ಯಾವುದೇ ತಾರತಮ್ಯ ಮಾಡದೆ ಉತ್ತಮ ಸೇವೆಯನ್ನು ನೀಡಿದ್ದೇವೆ. ಸಂಘದಲ್ಲಿ 2906 ಸದಸ್ಯರಿದ್ದು ಒಟ್ಟು ರೂ.25,71,65,421 ಠೇವಣಾತಿಯನ್ನು ಹೊಂದಿದೆ ಮತ್ತು ರೂ.5,02,77,000 ಪಾಲು ಬಂಡವಾಳವನ್ನು ಹೊಂದಿದೆ. ಮತ್ತು ರೂ.68,00,35,758 ದುಡಿಯುವ ಬಂಡವಾಳವನ್ನು ಹೊಂದಿದೆ. ನಮ್ಮ ಸಂಘವು ರೂ.54,84,87,942 ಸಾಲವನ್ನು ರೈತರಿಗೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ರೂ.2,81,71,66,790 ವ್ಯವಹಾರ ನಡೆಸಿ, ವಾರ್ಷಿಕವಾಗಿ 1,02,75,120.88 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.12 ರಷ್ಟು ಡಿವಿಡೆಂಡ್ ನೀಡುವುದಾಗಿ ಹೇಳಿದರು.

2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಯಿತು.

ಉಪಾಧ್ಯಕ್ಷ ಶಿವರಾಮ ಕೆಳಗಿನಂಗಡಿ, ನಿರ್ದೇಶಕರಾದ ಪ್ರಸನ್ನ ಯನ್, ರಾಜೇಶ್ ರೈ ಹೆನ್ನಡ್ಕ, ಪಾರ್ಶ್ವನಾಥ ಜೈನ್ ಕಲ್ಲಾಜೆ, ಶೇಸಪ್ಪ ಸಾಲಿಯಾನ್, ಅಶ್ರಫ್ ಪೊಸೆಕ್ಕೆಲ, ಲಿಡಿಯಾ ಜೆರೋಮ್ ಬ್ರಾಗ್ಸ್ , ಸವಿತಾ ವೆಂಕಟೇಶ್ ಪೂಜಾರಿ, ಪ್ರಸಾದ್ ಮೂರುಗೋಳಿ, ಮೋಹನ್ ಗೌಡ, ಸುರೇಶ್, ದ.ಕ.ಜಿ.ಕೇ.ಸ.ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ವೃತ್ತಿಪರ ನಿರ್ದೇಶಕರಾದ ಚಂದ್ರಶೇಖರ್, ಅರುಣ್ ಬಂಗೇರ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಟಿ‌. ವರದಿ ವಾಚಿಸಿದರು. ನಿರ್ದೇಶಕ ಶೇಸಪ್ಪ ಸಾಲಿಯಾನ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
error: Content is protected !!