September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಉಪನ್ಯಾಸಮಾಲೆ-5 ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಯದುಪತಿ ಗೌಡ ಇವರು ಸಭಾಧ್ಯಕ್ಷತೆಯನ್ನು ವಹಿಸಿ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮಾಧವ ಎಂ. ಕೆ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ ” ವಿನಾಯಕ ಕೃಷ್ಣ ಗೋಕಾಕ್ ರವರು ಕನ್ನಡದ ವಿಸ್ಮಯ ಕವಿ, ಗೋಕಾಕ್ ಚಳುವಳಿಯ ಹರಿಕಾರ, ವಿನಾಯಕ ಕಾವ್ಯ ನಾಮಾಂಕಿತರಾಗಿದ್ದು ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವವನ್ನು ಪಡಕೊಂಡರು. ಅವರ ಅಮೂಲ್ಯ ಬರಹಗಳು ಅವರಿಗೆ ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ತಂದುಕೊಟ್ಟಿತು. ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದು ಕನ್ನಡ ಸಾರಸ್ವತ ಲೋಕಕ್ಕೆ ಅವರು ನೀಡಿದ ಕೊಡುಗೆ ಸ್ತುತ್ಯರ್ಹವಾಗಿದೆ.” ಎಂದರು.

ಅರ್ಥಶಾಸ್ತ್ರ ಉಪನ್ಯಾಸಕರಾದ ವಸಂತಿ ಪಿ. ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಇವರು ವಂದಿಸಿದರು.ಈ ಸಂದರ್ಭದಲ್ಲಿ ” ಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು”ಎಂಬ ವಿ ಕೃ ಗೋಕಾಕರ ಪ್ರಸಿದ್ಧ ಹಾಡನ್ನು ಪ್ರಸ್ತುತಪಡಿಸಲಾಯಿತು.

Related posts

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya
error: Content is protected !!