22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

ಧರ್ಮಸ್ಥಳ :ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ ನಡೆಯಿತು.

ಶಿವಮೊಗ್ಗದಿಂದ ಆರಂಭವಾದ ಜಾಥ ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು. ಜಾಥದಲ್ಲಿ 200ಕ್ಕೂ ಹೆಚ್ಚು ವಾಹನದಲ್ಲಿ 1500ಕ್ಕೂ ಹೆಚ್ಚು ಧರ್ಮ ಭಕ್ತರು ಆಗಮಿಸಿದರು.

ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಇನ್ನು ಜಾಥದ ಜೊತೆಗೆ ತುಂಗಾ-ಗಂಗಾ-ನೇತ್ರಾವತಿಯ ಪವಿತ್ರ ನದಿಯಿಂದ ನೀರನ್ನು ತರಲಾಗಿದ್ದು, ಧರ್ಮಸ್ಥಳದಲ್ಲಿ ಮೂರು ನದಿಯ ನೀರು ಪ್ರೋಕ್ಷಣೆ ಮಾಡಲಾಗಿದೆ. ಜಾಥ ತಲುಪಿದ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ , ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ.

ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ. ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ. ಅಂದೇ ಇವರೆನ್ನೆಲ್ಲಾ ಅರೆಸ್ಟ್ ಮಾಡಿ ಒದ್ದು ಒಳಗೆ ಹಾಕಿದಿದ್ರೆ ಈ ಮಟ್ಟಿಗೆ ಈ ವಿಚಾರ ಬೆಳೆಯುತ್ತಿರಲಿಲ್ಲ. ಈಗ ಅವರ ಬಾಯಲ್ಲೇ ಎಲ್ಲಾ ಸತ್ಯ ಹೊರಬರುತ್ತಿದೆ.ಸರ್ಕಾರ ಇವರನ್ನ ಇಲ್ಲಿವರೆಗೆ ಬಿಟ್ಟದ್ದೇ ತಪ್ಪು.ವಿದೇಶಿ ಹಣ ಬಂದಿದೆ, ರಾಷ್ಟ್ರದ್ರೋಹಿಗಳು ಇದರಲ್ಲಿ ಕೈ ಜೋಡಿಸಿದ್ದಾರೆ. ಎಸ್.ಐ.ಟಿ.ಯಿಂದ ಸಾಕಷ್ಟು ಮಾಹಿತಿ ಹೊರಬಂದಿದೆ, ಅವರಿಗೆ ಧನ್ಯವಾದ ಎಂದರು. 18 ಅಡಿ ಗುಂಡಿ ತೆಗೆದು ಹೆಣ ಹೂಳಲು ಸಾಧ್ಯವೇ.ಪ್ರಕರಣವನ್ನ ಎನ್.ಐ.ಎ‌.ಗೆ ಕೊಡಬೇಕು. ಹಿಂದೂ ಧರ್ಮ ಉಳಿಯಬೇಕು, ಹಿಂದೂ ಧರ್ಮ ಉಳಿಯಲು ಪ್ರಾಣ ಕೊಡಲು ನಾವು ಸಿದ್ಧ ಎಂದರು. ಈ ಪ್ರಕರಣದ ಹಿಂದೆ ಇರುವ ಸಮೀರನಿಗೆ ಎಸ್ ಡಿ ಪಿಐ ಬೆಂಬಲ ಇದೆ. ವಕೀಲರುಗಳಿಗೆ ಹಣ ಎಲ್ಲಿಂದ ಸಿಗುತ್ತಿದೆ. ವಿದೇಶದ ಕಾಣದ ಕೈಗಳು ಕೆಲಸ ಮಾಡುತ್ತಿದೆ ಎಂದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!