25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪಡಂಗಡಿ: ಸ್ಮಾರ್ಟ್ ಕ್ಲಾಸ್ ಗಾಗಿ ನಾನು ನೀಡಿರುವ ಹಣ ಸದುಪಯೋಗವಾಗಿದ್ದು ನನಗೆ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಶಾಲೆಯ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಸಹಕಾರ ನೀಡಲಾಗುವುದು. ಮಕ್ಕಳು ಗುರು ಹಿರಿಯರನ್ನು ಗೌರವಿಸಬೇಕು. ಶೈಕ್ಷಣಿಕವಾಗಿ ಎಲ್ಲರೂ ಬೆಳೆಯಬೇಕೆಂಬ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇನೆ ಎಂದು ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಹೇಳಿದರು.

ಅವರು ಹಚ್ಛಾಡಿ ಶಾಲೆಗೆ ರೂ 1.75 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು

ದಾನಿ ಹರ್ಷ ಹೆಗ್ಡೆ ಮಾತನಾಡಿ ಸರಕಾರಿ ಶಾಲೆಯ ಉಳಿವಿಗಾಗಿ ನನ್ನ ಮನಸ್ಸು ಮಿಡಿಯುತ್ತಿದೆ. ಈ ನಿಟ್ಟಿನಲ್ಲಿ ಹಲವಾರು ಸರಕಾರಿ ಶಾಲೆಗಳಿಗೆ ಸಹಾಯ ಮಾಡುತ್ತಿದ್ದೇನೆ. ಸಮಾಜಕ್ಕಾಗಿ ನಾವು ಒಳ್ಳೆಯ ಕೆಲಸವನ್ನು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಮತ್ತು ದಾನಿಗಳನ್ನು ಗೌರವಿಸಲಾಯಿತು.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಕಾರ್ಯಕ್ರಮದ ಸಭಾಧ್ಯಕ್ಷೆಯನ್ನು ವಹಿಸಿದ್ದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ವಿನೋಧ ಶುಭ ಹಾರೈಸಿದರು. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಮಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಸುಮತಿ,ವಿಶ್ರಾಂತ ಶಿಕ್ಷಕ ರಮೇಶ ರಾವ್,ನಿಕಟ ಪೂರ್ವಾಧ್ಯಕ್ಷ ಡಾ. ಕೃಷ್ಣಾನಂದ,ಅಧಿಕಾರಿ ಜಗದೀಶ್, ಚಿತ್ರ ಕಲಾವಿದ ಧನುಷ್ ಹೆಗ್ಡೆ, ಸ್ಥಳೀಯ ಶಾಲೆಗಳ ಮುಖ್ಯ ಶಿಕ್ಷಕರು, ಎಸ್ ಡಿಎಂಸಿ ಸರ್ವ ಸದಸ್ಯರು ಮತ್ತು ಪೋಷಕರು, ವಿದ್ಯಾರ್ಥಿ ವೃoದ,ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕಮಲಾಕ್ಷಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗುಲಾಬಿ ವಂದಿಸಿದರು. ಶಿಕ್ಷಕಿ ಬೇಬಿಂದ್ರ ಮತ್ತು ದಿವ್ಯಶ್ರೀ ನಿರೂಪಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!