July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪಡಂಗಡಿ: ಸ್ಮಾರ್ಟ್ ಕ್ಲಾಸ್ ಗಾಗಿ ನಾನು ನೀಡಿರುವ ಹಣ ಸದುಪಯೋಗವಾಗಿದ್ದು ನನಗೆ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಶಾಲೆಯ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಸಹಕಾರ ನೀಡಲಾಗುವುದು. ಮಕ್ಕಳು ಗುರು ಹಿರಿಯರನ್ನು ಗೌರವಿಸಬೇಕು. ಶೈಕ್ಷಣಿಕವಾಗಿ ಎಲ್ಲರೂ ಬೆಳೆಯಬೇಕೆಂಬ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇನೆ ಎಂದು ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಹೇಳಿದರು.

ಅವರು ಹಚ್ಛಾಡಿ ಶಾಲೆಗೆ ರೂ 1.75 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು

ದಾನಿ ಹರ್ಷ ಹೆಗ್ಡೆ ಮಾತನಾಡಿ ಸರಕಾರಿ ಶಾಲೆಯ ಉಳಿವಿಗಾಗಿ ನನ್ನ ಮನಸ್ಸು ಮಿಡಿಯುತ್ತಿದೆ. ಈ ನಿಟ್ಟಿನಲ್ಲಿ ಹಲವಾರು ಸರಕಾರಿ ಶಾಲೆಗಳಿಗೆ ಸಹಾಯ ಮಾಡುತ್ತಿದ್ದೇನೆ. ಸಮಾಜಕ್ಕಾಗಿ ನಾವು ಒಳ್ಳೆಯ ಕೆಲಸವನ್ನು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಮತ್ತು ದಾನಿಗಳನ್ನು ಗೌರವಿಸಲಾಯಿತು.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಕಾರ್ಯಕ್ರಮದ ಸಭಾಧ್ಯಕ್ಷೆಯನ್ನು ವಹಿಸಿದ್ದರು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ವಿನೋಧ ಶುಭ ಹಾರೈಸಿದರು. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಮಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಸುಮತಿ,ವಿಶ್ರಾಂತ ಶಿಕ್ಷಕ ರಮೇಶ ರಾವ್,ನಿಕಟ ಪೂರ್ವಾಧ್ಯಕ್ಷ ಡಾ. ಕೃಷ್ಣಾನಂದ,ಅಧಿಕಾರಿ ಜಗದೀಶ್, ಚಿತ್ರ ಕಲಾವಿದ ಧನುಷ್ ಹೆಗ್ಡೆ, ಸ್ಥಳೀಯ ಶಾಲೆಗಳ ಮುಖ್ಯ ಶಿಕ್ಷಕರು, ಎಸ್ ಡಿಎಂಸಿ ಸರ್ವ ಸದಸ್ಯರು ಮತ್ತು ಪೋಷಕರು, ವಿದ್ಯಾರ್ಥಿ ವೃoದ,ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕಮಲಾಕ್ಷಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗುಲಾಬಿ ವಂದಿಸಿದರು. ಶಿಕ್ಷಕಿ ಬೇಬಿಂದ್ರ ಮತ್ತು ದಿವ್ಯಶ್ರೀ ನಿರೂಪಿಸಿದರು.

Related posts

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya
error: Content is protected !!