September 6, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ನೇಮಕ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!