July 23, 2026
Uncategorized

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ


ಧರ್ಮಸ್ಥಳ : ಮೈಸೂರಿನ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಸೆ.3 ಬುಧವಾರ ಸಂಜೆ ಧರ್ಮಸ್ಥಳಕ್ಕೆ ೫೦ ವಾಹನಗಳಲ್ಲಿ ಆಗಮಿಸಿದರು. ಅವರನ್ನು ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತಿಸಲಾಯಿತು.
ಬಳಿಕ ಅವರು ದೇವರ ದರ್ಶನ ಮಾಡಿ, “ಅನ್ನಪೂರ್ಣ”ದಲ್ಲಿ ಪ್ರಸಾದ ಸ್ವೀಕರಿಸಿದರು. ಧರ್ಮಸ್ಥಳದ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸರ್ವಧರ್ಮ ಸಮನ್ವಯ ಕ್ಷೇತ್ರದ ರಕ್ಷಣೆ ಹಾಗೂ ಪಾವಿತ್ರತೆಯನ್ನು ಕಾಪಾಡುವ ಬಗ್ಗೆ ಅವರು ತಮ್ಮಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಪತ್ತಿನ ಸಹಕಾರಿ ಮಹಾಮಂಡಲದ ಅಧ್ಯಕ್ಷರಾದ ಚಂದ್ರಶೇಖರ, ಕಾಂಗ್ರೆಸ್ ಪಕ್ಷದ ಮುಖಂಡ ಮಂಜುನಾಥ, ಬ್ಲಾಕ್ ಅಧ್ಯಕ್ಷ ರಮೇಶರಾಯಪ್ಪ, ರವಿ, ಮೈಸೂರಿನ ಮಾಜಿ ಮೇಯರ್ ಪುಷ್ಪಲತಾಚಿಕ್ಕಣ್ಣ, ಪುಷ್ಪವಲ್ಲಿ ಮೊದಲಾದವರು ಸೇರಿದಂತೆ ಸುಮಾರು 2೦೦೦ ಮಂದಿ ಆಗಮಿಸಿದ್ದಾರೆ.

Related posts

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!