22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!