22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya
error: Content is protected !!