25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!