23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!