23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

ಬೆಳ್ತಂಗಡಿ : ‘ಬದುಕು ಭಾವನೆಗಳ ಅಭಿವ್ಯಕ್ತಿ. ಆ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಶ್ರೇಷ್ಠ ಸಾಹಿತ್ಯವಾಗಿ ಮೂಡಿ ಬರಲು ಸಾಧ್ಯವಾಗುವುದು. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿಯೇ ಸಾಹಿತ್ಯ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಹೇಳಿದರು.

ಅವರು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಜ್ಞಾನ ಗಂಗಾ’ ಭಿತ್ತಿ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.

‘ಸಾಹಿತ್ಯದ ಓದು ಮತ್ತು ಬರವಣಿಗೆ ಬದುಕಿಗೆ ಸುಂದರ ಸ್ವರೂಪವನ್ನು ನೀಡುವಂತಹುದು. ಕಾಲೇಜು ಜೀವನದಲ್ಲಿ ಭಿತ್ತಿ ಪತ್ರಿಕೆ ಮೂಲಕ ಸಿಗುವ ಬರವಣಿಗೆಯ ಅನೇಕ ಅವಕಾಶಗಳ ಸದ್ಭಳಕೆ ಮಾಡಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡವರು ಜೀವನದ ಸುಖವನ್ನು ಅನುಭವಿಸಬಲ್ಲರು’ ಎಂದ ಅವರು ಅತ್ಯುತ್ತಮ ಭಿತ್ತಿ ಪತ್ರಿಕೆಗೆ ಉತ್ತಮ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಕಾಲೇಜಿನ ಸಾಹಿತ್ಯ ಸಂಘದ ಸಂಚಾಲಕರಾದ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಇದ್ದರು.

ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಸ್ವಾಗತಿಸಿದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೃತಿ ಕಾರ್ಯಕ್ರಮ ನಿರೂಪಿಸಿ, ದಿಶಾ ವಂದಿಸಿದರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
error: Content is protected !!