22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

ಬೆಳ್ತಂಗಡಿ : ‘ಬದುಕು ಭಾವನೆಗಳ ಅಭಿವ್ಯಕ್ತಿ. ಆ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಶ್ರೇಷ್ಠ ಸಾಹಿತ್ಯವಾಗಿ ಮೂಡಿ ಬರಲು ಸಾಧ್ಯವಾಗುವುದು. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿಯೇ ಸಾಹಿತ್ಯ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಹೇಳಿದರು.

ಅವರು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಜ್ಞಾನ ಗಂಗಾ’ ಭಿತ್ತಿ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.

‘ಸಾಹಿತ್ಯದ ಓದು ಮತ್ತು ಬರವಣಿಗೆ ಬದುಕಿಗೆ ಸುಂದರ ಸ್ವರೂಪವನ್ನು ನೀಡುವಂತಹುದು. ಕಾಲೇಜು ಜೀವನದಲ್ಲಿ ಭಿತ್ತಿ ಪತ್ರಿಕೆ ಮೂಲಕ ಸಿಗುವ ಬರವಣಿಗೆಯ ಅನೇಕ ಅವಕಾಶಗಳ ಸದ್ಭಳಕೆ ಮಾಡಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡವರು ಜೀವನದ ಸುಖವನ್ನು ಅನುಭವಿಸಬಲ್ಲರು’ ಎಂದ ಅವರು ಅತ್ಯುತ್ತಮ ಭಿತ್ತಿ ಪತ್ರಿಕೆಗೆ ಉತ್ತಮ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಕಾಲೇಜಿನ ಸಾಹಿತ್ಯ ಸಂಘದ ಸಂಚಾಲಕರಾದ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಇದ್ದರು.

ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಸ್ವಾಗತಿಸಿದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೃತಿ ಕಾರ್ಯಕ್ರಮ ನಿರೂಪಿಸಿ, ದಿಶಾ ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!