25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

ಬೆಳ್ತಂಗಡಿ : ‘ಬದುಕು ಭಾವನೆಗಳ ಅಭಿವ್ಯಕ್ತಿ. ಆ ಭಾವನೆಗಳಿಗೆ ಅಕ್ಷರ ರೂಪ ನೀಡಿದಾಗ ಶ್ರೇಷ್ಠ ಸಾಹಿತ್ಯವಾಗಿ ಮೂಡಿ ಬರಲು ಸಾಧ್ಯವಾಗುವುದು. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿಯೇ ಸಾಹಿತ್ಯ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಹೇಳಿದರು.

ಅವರು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಜ್ಞಾನ ಗಂಗಾ’ ಭಿತ್ತಿ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.

‘ಸಾಹಿತ್ಯದ ಓದು ಮತ್ತು ಬರವಣಿಗೆ ಬದುಕಿಗೆ ಸುಂದರ ಸ್ವರೂಪವನ್ನು ನೀಡುವಂತಹುದು. ಕಾಲೇಜು ಜೀವನದಲ್ಲಿ ಭಿತ್ತಿ ಪತ್ರಿಕೆ ಮೂಲಕ ಸಿಗುವ ಬರವಣಿಗೆಯ ಅನೇಕ ಅವಕಾಶಗಳ ಸದ್ಭಳಕೆ ಮಾಡಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡವರು ಜೀವನದ ಸುಖವನ್ನು ಅನುಭವಿಸಬಲ್ಲರು’ ಎಂದ ಅವರು ಅತ್ಯುತ್ತಮ ಭಿತ್ತಿ ಪತ್ರಿಕೆಗೆ ಉತ್ತಮ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಕಾಲೇಜಿನ ಸಾಹಿತ್ಯ ಸಂಘದ ಸಂಚಾಲಕರಾದ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ, ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಇದ್ದರು.

ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಸ್ವಾಗತಿಸಿದರು. ಸಾಹಿತ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೃತಿ ಕಾರ್ಯಕ್ರಮ ನಿರೂಪಿಸಿ, ದಿಶಾ ವಂದಿಸಿದರು.

Related posts

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!