July 23, 2026
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ ರಾಜೇಂದ್ರ ಅಜ್ರಿ ದೂರು ನೀಡಿದ್ದಾರೆ.
ದೂರುದಾರ ಹಾಗೂ ಆರೋಪಿಯಾಗಿರುವ ಚಿನ್ನಯ್ಯ ತನ್ನ ಹೇಳಿಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಅವರಿಗೆ ಎಲ್ಲ ದಾಖಲೆಗಳನ್ನು ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ, ಈ ಹಿನ್ನಲೆಯಲ್ಲಿ ಕೆ.ವಿ ಧನಂಜಯ್ ಅವರ ಬಳಿ ಇರುವ ದಾಖಲೆಗಳು ಏನು ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಅವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಹೊರತರಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ದೂರಿನಲ್ಲಿ ಕೆ.ವಿ ಧನಂಜಯ ಅವರ ವಿರುದ್ದ ಹಾಗೂ ಅವರೊಂದಿಗಿದ್ದ ನ್ಯಾಯವಾದಿಗಳಾದ ಓಜಸ್ವಿ ಗೌಡ, ಸಚಿನ್ ದೇಶ್ಪಾಂಡೆ, ದಿವಿನ್ ಧೀರಜ್, ಮಂಜುನಾಥ್ ಹಾಗೂ ಇತರರ ವಿರುದ್ದ ದೂರು ನೀಡಲಾಗಿದೆ. ದೂರನ್ನು ಸ್ವೀಕರಿಸಿರುವ ಎಸ್.ಐ.ಟಿ ಈ ಬಗ್ಗೆ ತನಿಖೆ ನಡೆಸುವುದಾಗಿ ಹಿಂಬರಹ ನೀಡಿದ್ದಾರೆ ಎಂದು ದೂರುದಾರ ರಾಜೇಂದ್ರ ಅಜ್ರಿ ಮತ್ತು ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related posts

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya
error: Content is protected !!