ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಸಂಸ್ಥೆಯ ವತಿಯಿಂದ ಪಂಚ-ಕಸುಬುಗಳಲ್ಲಿ ಒಂದಾದ “ಎರಕ ಶಿಲ್ಪ” ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ ಕೊಕ್ರಾಡಿ ಶ್ರೀ ನವದುರ್ಗ ಜುವೆಲ್ ಆರ್ಟ್ ಹರಿಶ್ಚಂದ್ರ ಆಚಾರ್ಯ ಕೊಕ್ರಾಡಿ ಯವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ನಿರ್ದೇಶಕರಾದ ಕೆ.ಯಜೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್ಯ, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು. ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಉಪಸ್ಥಿತರಿದ್ದರು. ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿದರು.
ಉಷಾ ಮನೋಜ್ ಹಾಗೂ ಶ್ರೀಕಾಂತ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಪ್ರಕಾಶ್ ಆಚಾರ್ಯ ಕೆ. ವಂದಿಸಿದರು.











