July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮ ಮಹಾಸಂಸ್ಥಾನದಲ್ಲಿ ಸೆ. 3ರಂದು ಜರುಗಿತು.

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ನಿರ್ಮಾತೃ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಶಿಷ್ಯರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ವಿವಿಧ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ತೊಡಗಿಸಿಕೊಂಡಿದ್ದಾರೆ. ರಾಮ ಜನ್ಮ ಭೂಮಿ ಅಯೋ ಶಾಖಾ ಮಠ ನಿರ್ಮಾಣದ ಕಾಮಗಾರಿ ಆರಂಭ ಗೊಂಡು ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದ ಯಶಸ್ವಿಯಾಗಿ ರಾಷ್ಟ್ರೀಯ ಧರ್ಮ ಸಂಸದ್ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ.

ಕಳೆದ 6 ವರ್ಷಗಳಿಂದ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡು ಈ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕು ವನದುರ್ಗಾ ದೇವಸ್ಥಾನದಲ್ಲಿ ಜು.10ರಿಂದ ಆ.20ರವರೆಗೆ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿದ್ದರು.

ಸೆ.3ರಂದು ಬೆಳಿಗ್ಗೆ ಭಕ್ತರಿಂದ ಪಾದಪೂಜೆಯನ್ನು ವೈದಿಕ ವೃಂದದವರು ನೆರವೇರಿಸಿ, ಕಿರೀಟ ಧಾರಣೆ ಮಾಡಲಾಯಿತು.

ಕಾಯ೯ಕ್ರಮದಲ್ಲಿ ಸಚಿವ ಮಂಕಾಲ್ ವೈದ್ಯ, ಎಂ ಎಲ್ಸಿ ಪ್ರತಾಪಸಿಂಹ ನಾಯಕ್, ಚಿತ್ತರಂಜನ್ ಮಂಗಳೂರು, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪೀತಾಂಬರ ಹೇರಾಜೆ, ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಪಿ.ಕೆ ರಾಜು ಪೂಜಾರಿ, ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ವಿಠಲ ಸಿ.ಪೂಜಾರಿ, ಸದಾನಂದ ಪೂಜಾರಿ ಉಂಗಿಲಬೈಲು, ರಾಜೇಶ್ ಪೂಜಾರಿ ಮುಡುಕೋಡಿ, ಪ್ರಶಾಂತ್ ನಾಯ್ಕ ಕುಮಟಾ, ಯೋಗೀಶ್ ಚಂದ್ರ, ಜಿ.ಪಂ ಮಾಜಿ ಸದಸ್ಯೆ ನಮಿತಾ ಪೂಜಾರಿ, ಜಯವಿಕ್ರಮ, ಈಶ್ವರ ನಾಯ್ಕ, ಹರೀಶ್ ಶಿವಮೊಗ್ಗ, ಬೆಳಾಲು ತಿಮ್ಮಪ್ಪ ಗೌಡ,ಪ್ರಮೋಳ್ ಕುಮಾರ್ ಸೇರಿದಂತೆ ಗಣ್ಯರು, ಕ್ಷೇತ್ರ ಭಕ್ತರು ಉಪಸ್ಥಿತರಿದ್ದರು.

Related posts

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!