32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ.

ವೇಣೂರು ಠಾಣಾ ವ್ಯಾಪ್ತಿಯ ವೇಣೂರು ನಾರಾವಿ ರಸ್ತೆಯ ಕೊಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸುಲ್ಕೇರಿ ನದಿಯಿಂದ ಮರಳನ್ನು ತುಂಬಿಸಿ ವೇಣೂರು ಕಡೆಗೆ ಸಾಗಾಟ ನಡೆಸುತ್ತಿದ್ದ ವೇಳೆ ಪೊಲೀಸರು ಮಿನಿ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶಿಲಿಸಲಾಗಿ ಇದರಲ್ಲಿ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ರೂ. ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಸಿಬ್ಬಂದಿಗಳಾದ ಕೃಷ್ಣ ಹೆಚ್ ಸಿ ಮತ್ತು ಸಂತೋಷ್ ಪಾಲ್ಗೊಂಡಿದ್ದರು.

Related posts

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!