September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ.

ವೇಣೂರು ಠಾಣಾ ವ್ಯಾಪ್ತಿಯ ವೇಣೂರು ನಾರಾವಿ ರಸ್ತೆಯ ಕೊಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸುಲ್ಕೇರಿ ನದಿಯಿಂದ ಮರಳನ್ನು ತುಂಬಿಸಿ ವೇಣೂರು ಕಡೆಗೆ ಸಾಗಾಟ ನಡೆಸುತ್ತಿದ್ದ ವೇಳೆ ಪೊಲೀಸರು ಮಿನಿ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶಿಲಿಸಲಾಗಿ ಇದರಲ್ಲಿ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ರೂ. ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಸಿಬ್ಬಂದಿಗಳಾದ ಕೃಷ್ಣ ಹೆಚ್ ಸಿ ಮತ್ತು ಸಂತೋಷ್ ಪಾಲ್ಗೊಂಡಿದ್ದರು.

Related posts

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!