September 6, 2026
ಅಪಘಾತವರದಿ

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ರಸ್ತೆಯ ಉಜಿರೆಯಲ್ಲಿ ಬುಧವಾರ ನಡೆದ ಲಾರಿ-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು (44), ಗುರುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ಉಜಿರೆ ಸಮೀಪ ಅವರು ಚಲಾಯಿಸುತ್ತಿದ್ದ ಬೈಕಿಗೆ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಗಾರೆ ಕಾರ್ಮಿಕರಾಗಿದ್ದ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.

Related posts

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!