July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಪ್ರವೇಶ ಪರೀಕ್ಷೆ (CSEET) ಓರಿಯೆಂಟೇಷನ್ ಕಾರ್ಯಾಗಾರವು ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ CS ಸಂತೋಷ್ ಪ್ರಭು ಹಾಗೂ ICSI ಮಂಗಳೂರು ಚಾಪ್ಟರ್‌ನ ಆಡಳಿತಾಧಿಕಾರಿ ಶಂಕರ್ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ. ಹಾಗೂ ಮುಖ್ಯಸ್ಥರಾದ ಪ್ರಸನ್ನ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಮಂತ್ ಕುಮಾರ್ ಜೈನ್ ಅವರು “ದೇಶದ ಅಭಿವೃದ್ಧಿಯಲ್ಲಿ ಕಂಪೆನಿ ಸೆಕ್ರೆಟರಿಗಳ ಕೊಡುಗೆ ಅಪಾರವಾಗಿದ್ದು, ವಿದ್ಯಾರ್ಥಿಗಳು ವೃತ್ತಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದರು.

ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ ಅವರು “ಪಿ.ಯು.ಸಿ ಹಂತದಲ್ಲಿಯೇ CS/CA ತರಬೇತಿ ಪಡೆದರೆ, ವಿದ್ಯಾರ್ಥಿಗಳು ಕಿರಿಯ ವಯಸ್ಸಿನಲ್ಲೇ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು” ಎಂದು ಹೇಳಿದರು.

CS ಸಂತೋಷ್ ಪ್ರಭು ಅವರು ಕಂಪೆನಿ ಸೆಕ್ರೆಟರಿ ವೃತ್ತಿಯ ವಿವಿಧ ಹಂತಗಳು, ಪರೀಕ್ಷಾ ತಯಾರಿ ಹಾಗೂ ಯಶಸ್ಸಿನ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ನೈದಿಲೆ, ವಂದನೆಯನ್ನು ಹಂಶಿಕಾ ಸಲ್ಲಿಸಿದ್ದು, ನಿರೂಪಣೆಯನ್ನು ಯಾನ ಪೊನ್ನಮ್ಮ ನಿರ್ವಹಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya
error: Content is protected !!