July 23, 2026
ವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

ಬೆಳ್ತಂಗಡಿ: ವಿಶೇಷವಾದ ಭೌಗೋಳಿಕ ಹಿನ್ನೆಲೆಯುಳ್ಳ ತುಳುನಾಡಿನ ಜೀವನ ಪದ್ಧತಿ, ಆಚರಣೆಗಳು ಬಲು ವಿಶಿಷ್ಟವಾಗಿದ್ದು ವಿಶ್ವ ಮಾನ್ಯತೆಯನ್ನು ಪಡೆದಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಕೋಳ್ತಿಗೆ ನಾರಾಯಣಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಂಪರ ವೇದಿಕೆಯ ಆಶ್ರಯದಲ್ಲಿ ನಡೆದ ತುಳು ಸಂಸ್ಕೃತಿಯ ಅನಾವರಣ ‘ಐಸಿರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಯುವಜನರು ಹೊಸತ್ತನ್ನು ಪಡೆದುಕೊಳ್ಳುವ ಭರದಲ್ಲಿ ಹಳೆಯ ಸಂಸ್ಕೃತಿಯನ್ನು ಮರೆಯದೆ ಜೀವನದಲ್ಲಿ ಅಳವಡಿಸಿ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ರೂಪಿಸುವಂತವರಾಗಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಾಧ್ಯಕ್ಷ ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪರಂಪರ ವೇದಿಕೆಯ ಸಂಯೋಜಕಿ ಶ್ರೀಮತಿ ಕಿಶೋರಿ ಎಸ್. ರಾವ್, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರವಂತ್, ಕು. ಅಭಿಜ್ಞಾ ಉಪಸಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಪರಂಪರ ವೇದಿಕೆಯ ಸಂಯೋಜಕ ರವಿಶಂಕರ್ ಧನ್ಯವಾದವಿತ್ತರು. ಕು. ಆರುಫಾ ಸುಹಾನ ಕಾರ್ಯಕ್ರಮ ನಿರೂಪಿಸಿದರು.

Related posts

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!