July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ (ಎಂಡೋಸಲ್ಫಾನ್ ಸಂತ್ರಸ್ತರಿಗೆ) ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಂಪಸ್, ಉಜಿರೆ, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ನ ಸೇವಾ ಯೋಜನೆ, ಪ್ರೆಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆಯು ಸೆ.9 ರಂದು ಬೆಳಿಗ್ಗೆ 11 ಕ್ಕೆ ಜರುಗಲಿದೆ ಎಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಆಡಳಿತದಾರ
ಡಾ. ವಸಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ನೆರವೇರಿಸಲಿರುವರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಪ್ರೆಸ್ ಕ್ಲಬ್ ನ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿ0ಜೆ ಭಾಗವಹಿಸುವರು. ಶ್ರೀ ಗಣೇಶ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲ ಅಧ್ಯಕ್ಷತೆಯನ್ನು ವಹಿಸುವರು.

ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಕಾರ್ಯಕ್ರಮದ ದ.ಕ. ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಜಸಿಂತಾ ಡಿ’ಸೋಜ, ಶ್ರೀ ಗಣೇಶ ಸೇವಾ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಶ್ಯಾಮ್ ಪ್ರಕಾಶ್, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ರೋಶನ್ ಪ್ರೇಮರಾಜ್ ಸಿಕ್ವೇರಾ, ಪ್ರಮೋದ್ ಆರ್ ನಾಯಕ್ ಭಾಗವಹಿಸುವರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!