22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬೆದ್ರಬೆಟ್ಟು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.

ವೇದಿಕೆಯಲ್ಲಿ ಮರಿಯಾಂಬಿಕ ಶಾಲಾ ಪ್ರಾಂಶುಪಾಲರಾದ ವಂ| ಫಾದರ್ ಮ್ಯಾತ್ಯು ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ನೆರವೇರಿಸಿ ಶುಭ ಹಾರೈಸಿದರು..

ಅತಿಥಿಗಳಾಗಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೊಯ್ಯೂರು, ವಲಯದ ಕ್ರೀಡಾ ಮೇಲ್ವಿಚಾರಕ ಗುಣಪಾಲ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಜೋಸ್ ಉಪಸ್ಥಿತರಿದ್ದು, ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಶಾಲಾ ಸಂಚಾಲಕರು ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ವಾಲಿಬಾಲ್ ಅಂಕಣದಲ್ಲಿ ಸರ್ವಿಸ್ ಮಾಡುವುದರ ಮುಖೇನ ಪಂದ್ಯಾಟಕ್ಕೆ ಚಾಲನೆ ನೀಡಿದರು. ಪಂದ್ಯಾಟದಲ್ಲಿ ತಾಲೂಕಿನ ಬಾಲಕರ ವಿಭಾಗದಿಂದ 8 ತಂಡ, ಬಾಲಕಿಯರ ವಿಭಾಗದಿಂದ 6 ತಂಡಗಳು ಭಾಗವಹಿಸಿದವು. ಶಾಲಾ ಸಂಚಾಲಕ ವಂದನೀಯ ಫಾ| ಸೆಬಾಸ್ಟಿಯನ್ ಇವರ ರೂವಾರಿಯಲ್ಲಿ, ಶಾಲಾ ಭೋಧಕ, ಭೋಧಕೇತರ ಸಿಬ್ಬಂದಿಗಳ, ಇಲಾಖೆಯ ಸಿಬ್ಬಂದಿಗಳ, ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರುಗಳ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು. ಶಾಲಾ ಶಿಕ್ಷಕ ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಧನ್ಯವಾದವಿತ್ತರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!