27.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

ಬೆಳ್ತಂಗಡಿ: ವಿಶೇಷವಾದ ಭೌಗೋಳಿಕ ಹಿನ್ನೆಲೆಯುಳ್ಳ ತುಳುನಾಡಿನ ಜೀವನ ಪದ್ಧತಿ, ಆಚರಣೆಗಳು ಬಲು ವಿಶಿಷ್ಟವಾಗಿದ್ದು ವಿಶ್ವ ಮಾನ್ಯತೆಯನ್ನು ಪಡೆದಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಕೋಳ್ತಿಗೆ ನಾರಾಯಣಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಂಪರ ವೇದಿಕೆಯ ಆಶ್ರಯದಲ್ಲಿ ನಡೆದ ತುಳು ಸಂಸ್ಕೃತಿಯ ಅನಾವರಣ ‘ಐಸಿರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಯುವಜನರು ಹೊಸತ್ತನ್ನು ಪಡೆದುಕೊಳ್ಳುವ ಭರದಲ್ಲಿ ಹಳೆಯ ಸಂಸ್ಕೃತಿಯನ್ನು ಮರೆಯದೆ ಜೀವನದಲ್ಲಿ ಅಳವಡಿಸಿ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ರೂಪಿಸುವಂತವರಾಗಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಾಧ್ಯಕ್ಷ ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪರಂಪರ ವೇದಿಕೆಯ ಸಂಯೋಜಕಿ ಶ್ರೀಮತಿ ಕಿಶೋರಿ ಎಸ್. ರಾವ್, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರವಂತ್, ಕು. ಅಭಿಜ್ಞಾ ಉಪಸಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಪರಂಪರ ವೇದಿಕೆಯ ಸಂಯೋಜಕ ರವಿಶಂಕರ್ ಧನ್ಯವಾದವಿತ್ತರು. ಕು. ಆರುಫಾ ಸುಹಾನ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya
error: Content is protected !!