37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ಮುಖ್ಯಮಂತ್ರಿಗಳಿಗೆ ಉಪ ತಹಶೀಲ್ದಾರರದ ಜಯ. ಕೆ ಇವರ ಮೂಲಕ ಮನವಿ ಪತ್ರ ಸಲ್ಲಿಸಿದ ಸಮಿತಿಯು, ಮೈಸೂರು ದಸರಾ ಕೇವಲ ಒಂದು ಸಾಂಸ್ಕೃತಿಕ ಹಬ್ಬವಲ್ಲ, ಬದಲಾಗಿ ಕರ್ನಾಟಕದ ಅತ್ಯಂತ ದೊಡ್ಡ ಧಾರ್ಮಿಕ ಮತ್ತು ಪಾರಂಪರಿಕ ಹಬ್ಬ. ನವರಾತ್ರಿಯ ಸಂದರ್ಭದಲ್ಲಿ ದೇವಿಯ ಆರಾಧನೆ ನಡೆಯುತ್ತಿದ್ದು, 10ನೇ ದಿನ ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹಾರ ಮಾಡಿದ ವಿಜಯೋತ್ಸವವನ್ನು ಆಚರಿಸಲಾಗುತ್ತದೆ. ಇಂತಹ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿಸಲ್ಪಡುವ ಮುಖ್ಯ ಅತಿಥಿಯು ದೇವಿಯ ಮೇಲೆ ಶ್ರದ್ಧೆ, ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಭಾನು ಮುಷ್ತಾಕ್ ಅವರು ಈ ಹಿಂದೆ ಮಾಡಿದ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲದೆ, ದತ್ತಪೀಠ ಹೋರಾಟದ ಸಂದರ್ಭದಲ್ಲೂ ಅವರು ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ಹಿಂದೂಗಳ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿಸುವುದು ಸೂಕ್ತವಲ್ಲ. ಇದು ಹಿಂದೂ ಸಮುದಾಯದ ಭಾವನೆಗಳನ್ನು ಗಣನೆಗೆ ತೆಗೆದುಕೊಳ್ಳದಿರುವ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತಿದೆ.

ಕಾರ್ಯಕ್ರಮದ ಉದ್ಘಾಟನೆಗೆ ಡಾ. ಎಸ್.ಎಲ್. ಭೈರಪ್ಪ ಅವರಂತಹ ಗಣ್ಯ ವ್ಯಕ್ತಿಗಳನ್ನು ಪರಿಗಣಿಸದೆ, ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸರಿಯಲ್ಲ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. “ಡಾ. ಎಸ್.ಎಲ್. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಗಳ ಜೊತೆಗೆ ಪದ್ಮಭೂಷಣ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಅವರ ಸಾಹಿತ್ಯ ಮತ್ತು ದಾರ್ಶನಿಕ ಕೊಡುಗೆಗಳು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದಿವೆ. ಇಂತಹ ಗೌರವಾನ್ವಿತ ವ್ಯಕ್ತಿಗಳನ್ನು ಕಡೆಗಣಿಸುವುದು ನಾಡಿನ ಸಂಸ್ಕೃತಿಗೆ ಮಾಡುವ ಅವಮಾನ,” ಎಂದು ಸಮಿತಿ ತಿಳಿಸಿದೆ. ಕೊಟ್ಯಾಂತರ ಹಿಂದೂ ಭಕ್ತರ ಭಾವನೆಗಳಿಗೆ ಗೌರವ ನೀಡಿ, ಭಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ಮತ್ತು ಮೈಸೂರು ದಸರಾ ಹಬ್ಬದ ಪಾವಿತ್ರ್ಯವನ್ನು ಕಾಪಾಡಲು ಡಾ. ಎಸ್. ಎಲ್. ಭೈರಪ್ಪ ಅವರಂತಹ ಗಣ್ಯರನ್ನು ಆಹ್ವಾನಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಈ ಮೂಲಕ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಉಮೇಶ್ ಬಂಗೇರ, ಶ್ರೀ ರಾಮ ಸೇವಾ ಸಮಿತಿ ಪಿಲ್ಯ, ಕೇಶವ ಅಚ್ಚಿನಡ್ಕ ಬೆಳ್ತಂಗಡಿ ನಗರ ಭಾ ಜ ಪ ಕಾರ್ಯದರ್ಶಿ, ವೀಣಾ ವಿ ಕುಮಾರ್ ಮಾಜಿ ನಗರ ಪಂಚಾಯತಿ ಅಧ್ಯಕ್ಷರು ಬೆಳ್ತಂಗಡಿ, ಯೋಗಿಶ್ ನಡಿಗುತ್ತು, ವಸಂತ ಬಂಗೇರ, ಶಿವರಾಮ್ ಉಜಿರೆ, ರಾಘವೇಂದ್ರ ಕಾಮತ್ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಯಂ. ಹರೀಶ್ ಇವರ ಸಹಭಾಗದಲ್ಲಿ ಮನವಿಯನ್ನು ಸಲ್ಲಿಸಲಾಯಿತು.

Related posts

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya
error: Content is protected !!