25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ “ಲೀಡರ್ಸ್ ಟಾಕ್” ಕಾರ್ಯಕ್ರಮದ ಅಂಗವಾಗಿ ಕಂಪನಿ ಸೆಕ್ರೆಟರಿ ಕೋರ್ಸ್‌ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉಡುಪಿ ಮೂಲದ ಪ್ರಾಕ್ಟಿಸಿಂಗ್ ಕಂಪನಿ ಸೆಕ್ರೆಟರಿ ಶ್ರೀ ಸಂತೋಷ್ ಪ್ರಭು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿ.ಎಸ್. ಕೋರ್ಸ್ ಮಾಡಿದರೆ ದೊರೆಯುವ ಉದ್ಯೋಗಾವಕಾಶಗಳು, ಕೋರ್ಸ್‌ನ ಅಗತ್ಯತೆ ಹಾಗೂ ಅದನ್ನು ಹೇಗೆ ಅಭ್ಯಾಸಿಸಬೇಕು ಎಂಬ ಕುರಿತು ವಿವರವಾದ ಮಾಹಿತಿಯನ್ನು ಅವರು ನೀಡಿದರು.

ಕಾರ್ಯಕ್ರಮದಲ್ಲಿ ವಾಣಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಮಂಗಳೂರು ಚಾಪ್ಟರ್‌ನ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಶಂಕರ್ ಬಿ. ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಓರಿಯಂಟೇಶನ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಕಾರ್ಯಕ್ರಮದ ನಿರ್ವಹಣೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ನೆರವೇರಿಸಿದರು.

Related posts

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!