37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ.

ವೇಣೂರು ಠಾಣಾ ವ್ಯಾಪ್ತಿಯ ವೇಣೂರು ನಾರಾವಿ ರಸ್ತೆಯ ಕೊಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸುಲ್ಕೇರಿ ನದಿಯಿಂದ ಮರಳನ್ನು ತುಂಬಿಸಿ ವೇಣೂರು ಕಡೆಗೆ ಸಾಗಾಟ ನಡೆಸುತ್ತಿದ್ದ ವೇಳೆ ಪೊಲೀಸರು ಮಿನಿ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶಿಲಿಸಲಾಗಿ ಇದರಲ್ಲಿ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ರೂ. ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಸಿಬ್ಬಂದಿಗಳಾದ ಕೃಷ್ಣ ಹೆಚ್ ಸಿ ಮತ್ತು ಸಂತೋಷ್ ಪಾಲ್ಗೊಂಡಿದ್ದರು.

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
error: Content is protected !!