September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ.

ವೇಣೂರು ಠಾಣಾ ವ್ಯಾಪ್ತಿಯ ವೇಣೂರು ನಾರಾವಿ ರಸ್ತೆಯ ಕೊಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸುಲ್ಕೇರಿ ನದಿಯಿಂದ ಮರಳನ್ನು ತುಂಬಿಸಿ ವೇಣೂರು ಕಡೆಗೆ ಸಾಗಾಟ ನಡೆಸುತ್ತಿದ್ದ ವೇಳೆ ಪೊಲೀಸರು ಮಿನಿ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶಿಲಿಸಲಾಗಿ ಇದರಲ್ಲಿ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ರೂ. ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಸಿಬ್ಬಂದಿಗಳಾದ ಕೃಷ್ಣ ಹೆಚ್ ಸಿ ಮತ್ತು ಸಂತೋಷ್ ಪಾಲ್ಗೊಂಡಿದ್ದರು.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
error: Content is protected !!