30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಪಟ್ರಮೆ ಇದರ ವಾರ್ಷಿಕ ಮಹಾಸಭೆಯು ಸೆ.3ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರುತಿ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ , ಬೆಳ್ತಂಗಡಿ ವಲಯ ಮೇಲ್ವಿಚಾರಕರದ ಜಯಾನಂದ್ , ಕೊಕ್ಕಡ ವಲಯದ ಮೇಲ್ವಿಚಾರಕಾರದ ಶ್ರೀಮತಿ ವೀಣಾಶ್ರೀ ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ನಳಿನಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ ರವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಎಮ್.ಬಿ.ಕೆ ಜಯ ರವರು 1 ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ವರದಿಗೆ ಅನುಮೋದನೆ ಪಡೆಯಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಕಾರ್ಯಕ್ರಮದ ಕುರಿತಾಗಿ ಮಾತನಾಡಿ ನಮ್ಮ ಗ್ರಾಮ ನಮ್ಮ ಜವಾಬ್ದಾರಿ ಎನ್ನುವ ಕಾರ್ಯಕ್ರಮದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾ ಸರಸ್ವತಿ ರವರು 2024-2025 ನೆ ಸಾಲಿನ ಸಿಎ ಆಡಿಟ್ ರಿಪೋರ್ಟ್ ನ್ನು ಮಂಡಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ಬಗ್ಗೆ, ದ್ಯೇಯೋದ್ದೇಶಗಳ ಬಗ್ಗೆ, ಜೀವನೋಪಾಯ ಚಟುವಟಿಕೆ ಬಗ್ಗೆ, ವಾರ್ಡ್ ರಚನೆ ಒಕ್ಕೂಟದ ಬಗ್ಗೆ ಹಾಗೂ ಹಲವಾರು ವಿಷಯ ಗಳ ಬಗ್ಗೆ, ಸವಿ ವಿಸ್ತಾರವಾದ ಮಾಹಿತಿ ನೀಡಿದರು. FNHW ಯೋಜನೆ ಯಡಿ ಪೋಷಣ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಯವರು ಪೌಷ್ಠಿಕ ಆಹಾರ ಆರೋಗ್ಯದ ಬಗ್ಗೆ ದಿನನಿತ್ಯ ಆಹಾರ ಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನವನ್ನು ಮಾಡಲಾಯಿತು. ಮಾದಕ ಪದಾರ್ಥ ಗಳ ವ್ಯಸನವು ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಲಾಯಿತು. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು, ಸಮುದಾಯ ಅರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕೃಷಿ ಸಖಿ ವಿನಂತಿನಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!