26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಪಟ್ರಮೆ ಇದರ ವಾರ್ಷಿಕ ಮಹಾಸಭೆಯು ಸೆ.3ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರುತಿ ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ , ಬೆಳ್ತಂಗಡಿ ವಲಯ ಮೇಲ್ವಿಚಾರಕರದ ಜಯಾನಂದ್ , ಕೊಕ್ಕಡ ವಲಯದ ಮೇಲ್ವಿಚಾರಕಾರದ ಶ್ರೀಮತಿ ವೀಣಾಶ್ರೀ ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ನಳಿನಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ ರವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಎಮ್.ಬಿ.ಕೆ ಜಯ ರವರು 1 ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ವರದಿಗೆ ಅನುಮೋದನೆ ಪಡೆಯಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಕಾರ್ಯಕ್ರಮದ ಕುರಿತಾಗಿ ಮಾತನಾಡಿ ನಮ್ಮ ಗ್ರಾಮ ನಮ್ಮ ಜವಾಬ್ದಾರಿ ಎನ್ನುವ ಕಾರ್ಯಕ್ರಮದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾ ಸರಸ್ವತಿ ರವರು 2024-2025 ನೆ ಸಾಲಿನ ಸಿಎ ಆಡಿಟ್ ರಿಪೋರ್ಟ್ ನ್ನು ಮಂಡಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ಬಗ್ಗೆ, ದ್ಯೇಯೋದ್ದೇಶಗಳ ಬಗ್ಗೆ, ಜೀವನೋಪಾಯ ಚಟುವಟಿಕೆ ಬಗ್ಗೆ, ವಾರ್ಡ್ ರಚನೆ ಒಕ್ಕೂಟದ ಬಗ್ಗೆ ಹಾಗೂ ಹಲವಾರು ವಿಷಯ ಗಳ ಬಗ್ಗೆ, ಸವಿ ವಿಸ್ತಾರವಾದ ಮಾಹಿತಿ ನೀಡಿದರು. FNHW ಯೋಜನೆ ಯಡಿ ಪೋಷಣ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಯವರು ಪೌಷ್ಠಿಕ ಆಹಾರ ಆರೋಗ್ಯದ ಬಗ್ಗೆ ದಿನನಿತ್ಯ ಆಹಾರ ಶೈಲಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನವನ್ನು ಮಾಡಲಾಯಿತು. ಮಾದಕ ಪದಾರ್ಥ ಗಳ ವ್ಯಸನವು ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಲಾಯಿತು. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು, ಸಮುದಾಯ ಅರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕೃಷಿ ಸಖಿ ವಿನಂತಿನಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾ ಧನ್ಯವಾದವಿತ್ತರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!