25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬೆದ್ರಬೆಟ್ಟು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.

ವೇದಿಕೆಯಲ್ಲಿ ಮರಿಯಾಂಬಿಕ ಶಾಲಾ ಪ್ರಾಂಶುಪಾಲರಾದ ವಂ| ಫಾದರ್ ಮ್ಯಾತ್ಯು ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ನೆರವೇರಿಸಿ ಶುಭ ಹಾರೈಸಿದರು..

ಅತಿಥಿಗಳಾಗಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೊಯ್ಯೂರು, ವಲಯದ ಕ್ರೀಡಾ ಮೇಲ್ವಿಚಾರಕ ಗುಣಪಾಲ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಜೋಸ್ ಉಪಸ್ಥಿತರಿದ್ದು, ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಶಾಲಾ ಸಂಚಾಲಕರು ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ವಾಲಿಬಾಲ್ ಅಂಕಣದಲ್ಲಿ ಸರ್ವಿಸ್ ಮಾಡುವುದರ ಮುಖೇನ ಪಂದ್ಯಾಟಕ್ಕೆ ಚಾಲನೆ ನೀಡಿದರು. ಪಂದ್ಯಾಟದಲ್ಲಿ ತಾಲೂಕಿನ ಬಾಲಕರ ವಿಭಾಗದಿಂದ 8 ತಂಡ, ಬಾಲಕಿಯರ ವಿಭಾಗದಿಂದ 6 ತಂಡಗಳು ಭಾಗವಹಿಸಿದವು. ಶಾಲಾ ಸಂಚಾಲಕ ವಂದನೀಯ ಫಾ| ಸೆಬಾಸ್ಟಿಯನ್ ಇವರ ರೂವಾರಿಯಲ್ಲಿ, ಶಾಲಾ ಭೋಧಕ, ಭೋಧಕೇತರ ಸಿಬ್ಬಂದಿಗಳ, ಇಲಾಖೆಯ ಸಿಬ್ಬಂದಿಗಳ, ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರುಗಳ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು. ಶಾಲಾ ಶಿಕ್ಷಕ ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಧನ್ಯವಾದವಿತ್ತರು.

Related posts

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
error: Content is protected !!