22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬೆದ್ರಬೆಟ್ಟು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.

ವೇದಿಕೆಯಲ್ಲಿ ಮರಿಯಾಂಬಿಕ ಶಾಲಾ ಪ್ರಾಂಶುಪಾಲರಾದ ವಂ| ಫಾದರ್ ಮ್ಯಾತ್ಯು ವಹಿಸಿದ್ದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ನೆರವೇರಿಸಿ ಶುಭ ಹಾರೈಸಿದರು..

ಅತಿಥಿಗಳಾಗಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೊಯ್ಯೂರು, ವಲಯದ ಕ್ರೀಡಾ ಮೇಲ್ವಿಚಾರಕ ಗುಣಪಾಲ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಜೋಸ್ ಉಪಸ್ಥಿತರಿದ್ದು, ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಶಾಲಾ ಸಂಚಾಲಕರು ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ವಾಲಿಬಾಲ್ ಅಂಕಣದಲ್ಲಿ ಸರ್ವಿಸ್ ಮಾಡುವುದರ ಮುಖೇನ ಪಂದ್ಯಾಟಕ್ಕೆ ಚಾಲನೆ ನೀಡಿದರು. ಪಂದ್ಯಾಟದಲ್ಲಿ ತಾಲೂಕಿನ ಬಾಲಕರ ವಿಭಾಗದಿಂದ 8 ತಂಡ, ಬಾಲಕಿಯರ ವಿಭಾಗದಿಂದ 6 ತಂಡಗಳು ಭಾಗವಹಿಸಿದವು. ಶಾಲಾ ಸಂಚಾಲಕ ವಂದನೀಯ ಫಾ| ಸೆಬಾಸ್ಟಿಯನ್ ಇವರ ರೂವಾರಿಯಲ್ಲಿ, ಶಾಲಾ ಭೋಧಕ, ಭೋಧಕೇತರ ಸಿಬ್ಬಂದಿಗಳ, ಇಲಾಖೆಯ ಸಿಬ್ಬಂದಿಗಳ, ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರುಗಳ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ಪಂದ್ಯಾಟವು ಯಶಸ್ವಿಯಾಗಿ ನಡೆಯಿತು. ಶಾಲಾ ಶಿಕ್ಷಕ ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಧನ್ಯವಾದವಿತ್ತರು.

Related posts

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya
error: Content is protected !!