23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

ಬೆಳ್ತಂಗಡಿ : ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ‌.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಎಂಬಾತನ ಮನೆಯಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತಂದು ಅಕ್ರಮ ದನಗಳನ್ನು ವಧೆ ಮಾಡುತ್ತಿರುವ ಮಾಹಿತಿ ಮೇರೆಗೆ ಸೆ.4 ರಂದು ರಾತ್ರಿ 9 ಗಂಟೆಗೆ ಮೇಲಾಧಿಕಾರಿಗಳಿಂದ ಸರ್ಚ್ ವಾರಂಟ್ ಪಡೆದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದಾಗ ಮೂರು ಕತ್ತಿ,ಎರಡು ಮರದ ಹಿಡಿ ಇರುವ ಚೂರಿ,ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಮರದ ತುಂಡು, ಒಂದು ನೀಲಿ ಟರ್ಪಾಲು, ಜೀವಂತ ಒಂದು ಹಸು ಮತ್ತು ಒಂದು ಕರು, ದನದ ತ್ಯಾಜ್ಯ ತುಂಬಿದ ಒಂದು ಓಮಿನಿ ಕಾರು, 9 ಕಡಿದ ದನದ ತಲೆಗಳನ್ನು ಬೆಳ್ತಂಗಡಿ ಪಶು ಇಲಾಖೆಯ ವೈದ್ಯರನ್ನು ಕರೆದು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಕಲಂ 112(2),303(2) BNS 2023 ಮತ್ತು ಕಲಂ 4,5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಅಡಿಯಲ್ಲಿ ಆರೋಪಿ ಮಹಮ್ಮದ್ ರಫೀಕ್ ಯಾನೆ ಅಪ್ಪಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ದಾಳಿ ವೇಳೆ ಪರಾರಿಯಾಗಿದ್ದಾರೆ. ಪ್ರಮುಖ ಆರೋಪಿ ಮೊಹಮ್ಮದ್‌ ರಫೀಕ್ ಯಾನೆ ಅಪ್ಪಿಗೆ ಬೆಳ್ತಂಗಡಿ ಪೊಲೀಸರು ಹಲವು ಭಾರಿ ಎಚ್ಚರಿಕೆ ನೀಡಿದ್ದರು ಈತ ಮತ್ತೆ ದನ ವಧೆ ಮಾಡುವ ದಂಧೆ ಮುಂದುವರಿಸಿದ್ದ ಎನ್ನಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್ ಮಾದರ ಹಾಗೂ ಸಿಬ್ಬಂದಿ ಶ್ರೀನಿವಾಸ್, ಸತೀಶ್, ಜಗದೀಶ್ ಚಾಲಕ ಧರೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!