July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ, ಇದರ 2024-25 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ. 04 ರಂದು ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 408 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 9252494.31 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ವಿತರಣೆ ಮಾಡಲಾಗಿದೆ ಎಂದರು.

ಸಂಘವು ಆಡಿಟ್ ವರ್ಗೀಕರಣದಲ್ಲಿ ಎ ವರ್ಗ ಹೊಂದಿದ್ದು,ಪ್ರಾರಂಭದಲ್ಲಿ ನಿಧನ ಹೊಂದಿದ  ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು . 

ಈ ಸಂದರ್ಭದಲ್ಲಿ ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ಅರವಿಂದ ಕಾರಂತ ಕೆ. , ಅನಿಲ್ ಪ್ರಕಾಶ್ ಡಿ’ಸೋಜಾ, ಬಾಲಕೃಷ್ಣ ಗೌಡ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ. ಅಣ್ಣು ನಾಯ್ಕ , ಸಾದು ಎಂ, ಮತ್ತು ಸಂಘದ , ಸುದರ್ಶನ್ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಸಿಬ್ಬಂದಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ರಜತ ಗೌಡ ವಂದಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!