23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ, ಇದರ 2024-25 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ. 04 ರಂದು ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ರವರು ವಹಿಸಿ ಮಾತನಾಡಿ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 408 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 9252494.31 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ವಿತರಣೆ ಮಾಡಲಾಗಿದೆ ಎಂದರು.

ಸಂಘವು ಆಡಿಟ್ ವರ್ಗೀಕರಣದಲ್ಲಿ ಎ ವರ್ಗ ಹೊಂದಿದ್ದು,ಪ್ರಾರಂಭದಲ್ಲಿ ನಿಧನ ಹೊಂದಿದ  ಸಂಘದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು . 

ಈ ಸಂದರ್ಭದಲ್ಲಿ ನಿರ್ದೇಶಕರಾದ ಅರುಣ ಕುಮಾರ್, ಗುರುರಾಜ್ ಅಂತರ, ಅರವಿಂದ ಕಾರಂತ ಕೆ. , ಅನಿಲ್ ಪ್ರಕಾಶ್ ಡಿ’ಸೋಜಾ, ಬಾಲಕೃಷ್ಣ ಗೌಡ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಶ್ರೀಮತಿ ವಾರಿಜ ಎಸ್ ಗೌಡ. ಅಣ್ಣು ನಾಯ್ಕ , ಸಾದು ಎಂ, ಮತ್ತು ಸಂಘದ , ಸುದರ್ಶನ್ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಸದಾಶಿವ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸರಸ್ವತಿ ಸಿ ರೈ ವರದಿ ಮಂಡಿಸಿದರು. ಸಿಬ್ಬಂದಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ರಜತ ಗೌಡ ವಂದಿಸಿದರು.

Related posts

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya
error: Content is protected !!