ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸೆ.5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.

ಸಂಘವು ವರದಿ ಸಾಲಿನಲ್ಲಿ ರೂ.1100 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.3.00ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.


ಬೆಳ್ತಂಗಡಿಯಲ್ಲಿ ಸೊಸೈಟಿಗೆ 11 1/2 ಸೆಂಟ್ಸ್ ಜಾಗ ಖರೀದಿ ಮಾಡಲಾಗಿದೆ. 2030 ಕ್ಕೆ ಸೊಸೈಟಿಗೆ ಬೆಳ್ಳಿ ಹಬ್ಬ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಈ ವರ್ಷದಲ್ಲಿ ಧರ್ಮಸ್ಥಳದಲ್ಲಿ ಒಂದು ಶಾಖೆ ಹಾಗೂ ಮಂಗಳೂರಿನಲ್ಲಿ ಮೂರು ಶಾಖೆ ಒಟ್ಟು 4 ಶಾಖೆ ಪ್ರಾರಂಭಗೊಳ್ಳಲಿದೆ ಎಂದರು.

ಮುಖ್ಯ ಕಾರ್ಯನಿರ್ವಣಧಿಕಾರಿ ಸುಜಯ್ ಶೆಟ್ಟಿ ವರದಿ ಮಂಡಿಸಿದರು

ವೇದಿಕೆಯಲ್ಲಿ ನಿರ್ದೇಶಕರಾದ ಎಂ. ಜಿ. ಶೆಟ್ಟಿ.ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಸಾರಿಕಾ ಶೆಟ್ಟಿ, ವಿಜಯ ಬಿ. ಶೆಟ್ಟಿ ಖಾಯಂ ಆಹ್ವಾನಿತರು, ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಮಾರ್ಗದರ್ಶಕರಾದ ಉದ್ಯಮಿ ಶಶಿಧರ ಶೆಟ್ಟಿ, ಜಯರಾಮ್ ಶೆಟ್ಟಿ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷ ಜಯರಾಮ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ದೇರಳಕಟ್ಟೆ ಶಾಖೆಯಲ್ಲಿ ಕೆಲಸ ಮಾಡಿದ ನವೀನ್ ರೈರವನ್ನು ಗೌರವಿಸಿ ಬೀಳ್ಕೊಡಲಾಯಿತು.
ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮವನ್ನು ನಿರೂಪಿಸಿ, ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿ, ನಿರ್ದೇಶಕರಾದ ಸೀತಾರಾಮ್ ಶೆಟ್ಟಿ ಧನ್ಯವಾದವಿತ್ತರು.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya
error: Content is protected !!